February 8, 2019

ಮಹಾಮಸ್ತಕಾಭಿಷೇಕ

ಇಂದಿನಿಂದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ

ಬೆಳ್ತಂಗಡಿ: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 9ರಿಂದ 18ರ ವರೆಗೆ ಮಹಾಮಸ್ತಕಾಭಿಷೇಕ ದ ಸಂಭ್ರಮ. ಮಹಾನ್ ವಿರಾಗಿ ಬಾಹುಬಲಿಗೆ 12 ವರ್ಷಕ್ಕೊಮ್ಮೆ ನಡೆಯುವ ಮಹಾಮಜ್ಜನಕ್ಕೆ ಮಂಜುನಾಥನ ಕ್ಷೇತ್ರ ಸಜ್ಜಾಗಿದೆ. ಧರ್ಮಸ್ಥಳದ ರತ್ನಗಿರಿಯಲ್ಲಿ ಫೆ.9ರಿಂದ 18ರ ವರೆಗೆ ಸಂತ ಸಮ್ಮೇಳನ ಸೇರಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬಾಹುಬಲಿಯ ಪ್ರತಿಷ್ಠಾಪಕರಾಗಿರುವ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ.ಹೆಗ್ಗಡೆಯವರ ನೇತೃತ್ವದಲ್ಲಿ ಮಹಾಮಸ್ತಕಾಭಿಷೇಕದ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಹಾಮಜ್ಜನದ ಭಾಗವಾಗಿ ವಿವಿಧ ಜನಮಂಗಲ, ಜನಕಲ್ಯಾಣ ಕಾರ್ಯಕ್ರಮಗಳು ನಾಡಿಗೆ ಸಮರ್ಪಿತವಾಗಲಿವೆ. […]

ಇಂದಿನಿಂದ ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಮಸ್ತಕಾಭಿಷೇಕ ಸಂಭ್ರಮ Read More »

ಡಬಲ್ ಡೆಕ್ಕರ್

ರಾಜ್ಯ ಬಜೆಟ್: ಮೈಸೂರಿಗೆ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ

ಬೆಂಗಳೂರು: ವಿಶ್ವ ವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳನ್ನು ಇನ್ನು ಮುಂದೆ ಡಬಲ್ ಡೆಕ್ಕರ್ ಬಸ್ಸಿನಲ್ಲಿ ವೀಕ್ಷಣೆ ಮಾಡಬಹುದು. ಸಿಎಂ ಇಂದು ಮಂಡಿಸಿದ ಬಜೆಟ್ ನಲ್ಲಿ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಘೋಷಿಸಿದ್ದಾರೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ(ಕೆಎಸ್‍ಟಿಡಿಸಿ) ವತಿಯಿಂದ ಮೈಸೂರಿನಲ್ಲಿ ಲಂಡನ್ ಬಿಗ್ ಬಸ್ ಮಾದರಿಯ 6 ಡಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭಿಸಲು 5 ಕೋಟಿ ರೂ. ಅನುದಾನವನ್ನು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ರಾಜ್ಯ ಬಜೆಟ್: ಮೈಸೂರಿಗೆ ಲಂಡನ್ ಮಾದರಿಯ ಡಬಲ್ ಡೆಕ್ಕರ್ ಬಸ್ ಸೇವೆ Read More »

Scroll to Top