September 10, 2019

ನಂಜನಗೂಡಿನಲ್ಲಿ 3 ಚಿರತೆ ಸಾವು: ವಿಷ ಹಾಕಿ ಕೊಂದಿರುವ ಶಂಕೆ

ಮೈಸೂರು: ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಮೃತಪಟ್ಟ ಘಟನೆ ನಂಜನಗೂಡಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ಹಿಂಬದಿಯಲ್ಲಿರುವ ಚೆನ್ನಬಸಪ್ಪ ಎಂಬವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯ ವಲಯದಿಂದ ಹಲ್ಲರೆ ಗ್ರಾಮದತ್ತ ಆಗಮಿಸಿರುವ ಸುಮಾರು 10 ವರ್ಷದ ಹೆಣ್ಣು ಚಿರತೆಯ ಜೊತೆಗೆ 8 ತಿಂಗಳ, 2 ಹೆಣ್ಣು ಚಿರತೆ ಮರಿಗಳು ಸಾವನ್ನಪ್ಪಿವೆ. ಚಿರತೆ ಸತ್ತ ನಾಯಿಯನ್ನು ತಿಂದು ಸಾವನ್ನಪ್ಪಿದೆ. ನಾಯಿಗಳ ಹಾವಳಿ ತಪ್ಪಿಸಲು ಅವುಗಳಿಗೆ ವಿಷಾಹಾರ […]

ನಂಜನಗೂಡಿನಲ್ಲಿ 3 ಚಿರತೆ ಸಾವು: ವಿಷ ಹಾಕಿ ಕೊಂದಿರುವ ಶಂಕೆ Read More »

ಜಂಬೂಸವಾರಿಗೂ ಮೊದಲೇ ಕಾಡಿಗೆ ವಾಪಸ್ ತೆರಳಲಿದ್ದಾನೆ ಈಶ್ವರ

ಮೈಸೂರು: ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಿದ್ದ ಆನೆ ಈಶ್ವರನನ್ನು ಕಾಡಿನತ್ತ ವಾಪಸ್ ಕಳುಹಿಸುವ ಚಿಂತನೆ ನಡೆಸಲಾಗಿದೆ. ದುಬಾರೆ ಆನೆ ಶಿಬಿರದಿಂದ ಗಜಪಡೆಯ ಮೊದಲ ತಂಡದಲ್ಲಿ ದಸರೆಗೆಂದು ಈಶ್ವರ ಆಗಮಿಸಿದ್ದ. ಆತ ನಗರದ ವಾತವರಣಕ್ಕೆ ಹೊಂದಿಕೊಳ್ಳದ ಕಾರಣ ವಾಪಸ್ ಕಳುಹಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ. ದಸರೆಗೆ ಸಂಬಂಧಿಸಿದಂತೆ ನಡೆದ ಸಭೆಯಲ್ಲಿ ಮೈಸೂರು ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಆನೆಯ ಬಗ್ಗೆ ಆತಂಕ ಹೊರಹಾಕಿದ್ದರು. ಅಲ್ಲದೇ ಆನೆಯ ವರ್ತನೆ ಸಾರ್ವಜನಿಕರಿಂದಲೂ ದೂರುಗಳು ಬಂದ ಹಿನ್ನೆಲೆ ವಾಪಸ್ ಕಳಿಸಲು ನಿರ್ಧಾರ

ಜಂಬೂಸವಾರಿಗೂ ಮೊದಲೇ ಕಾಡಿಗೆ ವಾಪಸ್ ತೆರಳಲಿದ್ದಾನೆ ಈಶ್ವರ Read More »

Scroll to Top