January 11, 2020

ದೇವರಾಜ ಮಾರುಕಟ್ಟೆ, ಲ್ಯಾನ್ಸ್‌ ಡೌನ್‌ ಕಟ್ಟಡ ಒಡೆದು ಕಟ್ಟಿ: ತಜ್ಞರ ವರದಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲಾನ್ಸ್‌ ಡೌನ್‌ ಬಿಲ್ಡಿಂಗ್‌ ನೆಲಸಮಗೊಳಿಸಿ ಹೊಸದಾಗಿ ಕಟ್ಟುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಸಂಬಂಧ ತಜ್ಞರ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಪಾಲಿಕೆ ಸಿದ್ಧತೆ ನಡೆಸಿಕೊಂಡಿದೆ. ದೇವರಾಜ ಮಾರುಕಟ್ಟೆ ಕೆಡವಬೇಕು ಎಂಬ ಅಭಿಪ್ರಾಯ ವ್ಯಕ್ತವಾದಾಗ ಮಾರುಕಟ್ಟೆ ವ್ಯಾಪಾರಸ್ಥರು ಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಕೋರ್ಟ್‌ ಈ ಸಂಬಂಧ ತಜ್ಞರ ಸಮಿತಿ ರಚಿಸಿ ಅಭಿಪ್ರಾಯ ಪಡೆದುಕೊಂಡು 6 ತಿಂಗಳೊಳಗೆ ಸಮಸ್ಯೆ ಇತ್ಯರ್ಥ ಪಡಿಸುವಂತೆ ಪಾಲಿಕೆಗೆ ಸೂಚಿಸಿತ್ತು. ಈ ಸಂಬಂಧ […]

ದೇವರಾಜ ಮಾರುಕಟ್ಟೆ, ಲ್ಯಾನ್ಸ್‌ ಡೌನ್‌ ಕಟ್ಟಡ ಒಡೆದು ಕಟ್ಟಿ: ತಜ್ಞರ ವರದಿ Read More »

ಸಾಹಿತ್ಯ ಲೋಕದ ದಿಗ್ಗಜ ಚಿದಾನಂದ ಮೂರ್ತಿ ಇನ್ನಿಲ್ಲ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಸಂಶೋಧಕ, ಪ್ರೋಫೆಸರ್​ ಚಿದಾನಂದ ಮೂರ್ತಿಯವರು ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಇವತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ವಿಜಯನಗರ ಸಮೀಪ ಹಂಪಿ ನಗರದ ಮೂರನೇ ಕ್ರಾಸ್‌ನಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 9ಗಂಟೆ ನಂತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಿದಾನಂದಮೂರ್ತಿಯವರ ಆಸೆಯಂತೆ ಅವರ ದೇಹವನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಭಾನುವಾರ

ಸಾಹಿತ್ಯ ಲೋಕದ ದಿಗ್ಗಜ ಚಿದಾನಂದ ಮೂರ್ತಿ ಇನ್ನಿಲ್ಲ Read More »

Scroll to Top