March 22, 2020

helicopter-ride-in-mysuru-4

ಮಾರ್ಚ್ 31ರ ವರೆಗೂ ಮೈಸೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್ ಡೌನ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆತಂಕ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರಕಾರ ಇಂದು ಒಂಬತ್ತು ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶ ಹೊರಡಿಸಿದೆ. ಬೆಂಗಳೂರು ಸೇರಿದಂತೆ 9 ಜಿಲ್ಲೆಗಳನ್ನು ಮಾರ್ಚ್.31ರವರೆಗೂ ಲಾಕ್ ಡೌನ್ ಮಾಡುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯಾವ ಜಿಲ್ಲೆಗಳು ಲಾಕ್ ಡೌನ್: ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ಮಂಗಳೂರು, ಕರ್ನಾಟಕದಲ್ಲಿ ಕೊರೋನ ವೈರಾಣುವನ್ನು ನಿಗ್ರಹ ಮಾಡುವ ದೃಷ್ಟಿಯಿಂದ ಕೈಗೊಂಡಿರುವ ತುರ್ತು ನಿರ್ಧಾರಗಳು. ರಾಜ್ಯದಲ್ಲಿ ನಾಳೆ […]

ಮಾರ್ಚ್ 31ರ ವರೆಗೂ ಮೈಸೂರು ಸೇರಿ ರಾಜ್ಯದ 9 ಜಿಲ್ಲೆಗಳು ಲಾಕ್ ಡೌನ್ Read More »

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು

ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆ ಮಾರ್ಚ್ 31ರ ಮಧ್ಯ ರಾತ್ರಿಯವರೆಗೆ ದೇಶಾದ್ಯಂತ ಎಲ್ಲಾ ಪ್ಯಾಸೆಂಜರ್ ರೈಲು ಸಂಚಾರ ಸ್ಥಗಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ. ಭಾನುವಾರ ಈ ಕುರಿತು ರೈಲ್ವೆ ಅಧಿಕೃತ ಆದೇಶ ಹೊರಡಿಸಿದೆ. ರೈಲ್ವೆಯಲ್ಲಿ ಪ್ರಯಾಣ ಮಾಡಿದ 12 ಜನರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ಖಚಿತವಾಗಿತ್ತು. ‘ಜನತಾ ಕರ್ಫ್ಯೂ’ಗೆ ಬೆಂಬಲ ನೀಡಿ ಭಾನುವಾರ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ ಪ್ಯಾಸೆಂಜರ್ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಗೂಡ್ಸ್ ರೈಲುಗಳು ಎಂದಿನಂತೆ

ಕೊರೋನಾ ವೈರಸ್ ಭೀತಿ: ಮಾ.31ರವರೆಗೆ ಎಲ್ಲಾ ಪ್ರಯಾಣಿಕ ರೈಲು ಸಂಚಾರ ರದ್ದು Read More »

ಕೊರೋನಾ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಸೇರಿದಂತೆ ಎಲ್ಲ ಪರೀಕ್ಷೆಯನ್ನ ಮುಂದೂಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೋನಾ ತಡೆಗೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿದೆ. ಈ ನಿಒಟ್ಟಿನಲ್ಲಿ SSLC ಪರೀಕ್ಷೆ ಕೂಡ ಮೂಂದೂಡಿಕೆಯಾಗಿದೆ. ಭಾನುವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು, ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ. ಯಾರೂ ಹೆದರುವ ಅಗತ್ಯವಿಲ್ಲ. ಸಧ್ಯ ನಿಗದಿಯಾಗಿದ್ದ ಚುನಾವಣೆ, ಪರೀಕ್ಷೆಗಳನ್ನು ಮುಂದೂಡಲಾಗಿದೆ

ಕೊರೋನಾ ಎಫೆಕ್ಟ್: SSLC ಪರೀಕ್ಷೆ ಮುಂದೂಡಿಕೆ Read More »

Scroll to Top