ಮೈಸೂರು ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತ, ಜಿಲ್ಲಾ ಪೊಲಿಸ್ ಅಧೀಕ್ಷಕ, ಪಾಲಿಕೆ ಆಯುಕ್ತರು ಲೈವ್’ನಲ್ಲಿ ನೀಡಿದ ಮುಖ್ಯ ಮಾಹಿತಿಗಳು
ಮೈಸೂರು: ಕೋವಿಡ್-19 ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಲಾಕ್ಡೌನ್ ಮುಂದುವರಿದಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಅಭಿರಾಮ್ ಜಿ.ಶಂಕರ್, ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ಪ, ಜಿಲ್ಲಾ ಪೊಲಿಸ್ ಅಧೀಕ್ಷಕರಾದ ಸಿ.ಬಿ.ರಿಷ್ಯಂತ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ಅವರು ದಿನಾಂಕ: 3-5-2020 ರಂದು ಜಂಟಿಯಾಗಿ ವಾರ್ತಾ ಇಲಾಖೆಯ ಎಫ್.ಬಿ. ಪೇಜ್ನಲ್ಲಿ ನೀಡಿದ ಲೈವ್ ಸಂದೇಶದ ಮುಖ್ಯಾಂಶಗಳು: ಮೈಸೂರು ಜಿಲ್ಲೆ ಇನ್ನೂ ರೆಡ್ ಜೋನ್ನಲ್ಲಿ ಇದ್ದು, ಇಡೀ ಜಿಲ್ಲೆಯನ್ನು ರೆಡ್ ಜೋನ್ ಎಂದೇ ಪರಿಗಣಿಸಬೇಕು. ಕೆಲವೊಂದು ಪ್ರದೇಶಗಳಿಗೆ ಮಾತ್ರ ರೆಡ್ ಜೋನ್ ಅನ್ವಯಿಸುತ್ತದೆ […]