Mysuru Dasara 2020

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು

ಮೈಸೂರು: ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಅರಮನೆಗೆ ಆಗಮಿಸಿರುವ ಅಭಿಮನ್ಯು ನೇತೃತ್ವದ ಗಜಪಡೆ ಮಾವುತರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು. ಕೊರೋನಾ ಮುಂಜಾಗ್ರತಾ ಕ್ರಮವಾಗಿ ಮೈಸೂರಿನ ಅರಮನೆಯಲ್ಲಿ ದಸರಾ ಆನೆಗಳ ಜತೆ ಬೀಡುಬಿಟ್ಟಿರುವ ಮಾವುತರು, ಕಾವಾಡಿಗಳಿಗೆ ಇಂದು ಕೊರೋನಾ ಟೆಸ್ಟ್ ಮಾಡಲಾಗಿದೆ. 5 ಆನೆಗಳ ಮಾವುತ, ಕಾವಾಡಿ ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೋನಾ ಟೆಸ್ಟ್ ಮಾಡಲಾಯಿತು. 15ಕ್ಕೂ ಹೆಚ್ಚು ಮಾವುತ ಕಾವಾಡಿಗಳು ಆ್ಯಂಟಿಜನ್ ರ್ಯಾಪಿಡ್ ಟೆಸ್ಟ್ ಮಾಡಿಸಿಕೊಂಡಿದ್ದು, ಇಂದು ಸಂಜೆಯೊಳಗೆ ಮಾವುತ ಕಾವಾಡಿಗಳ ಕೊರೋನಾ ಟೆಸ್ಟ್ ರಿಸಲ್ಟ್ ಬರಲಿದೆ. […]

ದಸರಾ ಗಜಪಡೆಯ ಮಾವುತರು, ಕಾವಾಡಿಗರಿಗೆ ಇಂದು ಕೋವಿಡ್‌ ಪರೀಕ್ಷೆ ನಡೆಸಲಾಯಿತು Read More »

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಪಯಣ ಬೆಳಸಿವೆ. ಈ ಬಾರಿಯ ದಸರಾ ಮಹೋತ್ಸವದಲ್ಲಿ ಕೇವಲ ಐದು ಆನೆಗಳು ಪಾಲ್ಗೊಳ್ಳುತ್ತಿದ್ದು ಅಭಿಮನ್ಯು, ವಿಕ್ರಮ, ಗೋಪಿ, ವಿಜಯ ಮತ್ತು ಕಾವೇರಿ ಆನೆಗಳು ಮೈಸೂರಿಗೆ ಆಗಮಿಸಿವೆ. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ ಇಂತಿದೆ: ಅಭಿಮನ್ಯು: ಗಂಡಾನೆ 54ವರ್ಷ, ಮತ್ತಿಗೋಡು ಆನೆ ಶಿಬಿರ, ವಸಂತ ಮಾವುತ, ಕಾವಾಡಿ ರಾಜು, ಶರೀರದ ಎತ್ತರ 2.68ಮೀಟರ್, ಶರೀರದ ಉದ್ದ 3.51ಮೀಟರ್, ಅಂದಾಜು ತೂಕ

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆಗಳ ವಿವರ Read More »

ಮೈಸೂರು ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ;- ಮೈಸೂರಿನತ್ತ ಗಜಪಡೆ ಪಯಣ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗಿದ್ದು ಗಜಪಡೆಗಳು ಮೈಸೂರಿನತ್ತ ಪಯಣ ಬೆಳಸಿವೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳ ಮತ್ತು ಸಾಂಪ್ರದಾಯಿಕವಾಗಿ ದಸರಾ ನಡೆಯಲಿದೆ. ಹೀಗಾಗಿ ವೀರನಹೊಸಳ್ಳಿಯಲ್ಲಿ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಐದು ಆನೆಗಳ ತಂಡವನ್ನು ವೀರನಹೊಸಳ್ಳಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾಂಪ್ರದಾಯಿಕವಾಗಿ ಕರೆತರುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಕೇವಲ ಅಧಿಕಾರಿಗಳಷ್ಟೇ ಭಾಗಿಯಾಗಿದ್ದರು. ಜನಪ್ರತಿನಿಧಿಗಳು ಭಾಗಿಯಾಗಿಲ್ಲ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಪಂ ಸಿಇಒ ಡಿ.ಭಾರತಿ,

ಮೈಸೂರು ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ;- ಮೈಸೂರಿನತ್ತ ಗಜಪಡೆ ಪಯಣ Read More »

ಮೈಸೂರು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ಅವಕಾಶ

ಮೈಸೂರು: ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ದಸರಾ ಮಹೋತ್ಸವದ ಅಂಗವಾಗಿ ಅಂಬಾವಿಲಾಸ ಅರಮನೆಯಲ್ಲಿ ಜೋಡಿಸಿರುವ ರತ್ನಖಚಿತ ಸಿಂಹಾಸನ ನೋಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು, ಸಿಂಹಾಸನ ವೀಕ್ಷಣೆಗೆ 50 ರೂ. ದರ ನಿಗದಿಪಡಿಸಲಾಗಿದೆ. 15 ಅಡಿ ದೂರದಲ್ಲಿ ನಿಂತು ಸಿಂಹಾಸನ ವೀಕ್ಷಣೆ ಮಾಡಬಹುದಾಗಿದೆ. ಛಾಯಾ ಚಿತ್ರ, ವಿಡಿಯೋ ತೆಗೆಯುವುದನ್ನು ನಿಷೇಧಿಸಲಾಗಿದೆ. ಪ್ರತಿವರ್ಷ ದಸರಾ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸಿಂಹಾಸನದ ಜೋಡಣೆ ನಡೆಯುತ್ತದೆ. ಈ ಬಾರಿ ಅಧಿಕ ಮಾಸದ ಕಾರಣ ಒಂದು ತಿಂಗಳು

ಮೈಸೂರು ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನ ವೀಕ್ಷಣೆಗೆ ಅವಕಾಶ Read More »

Scroll to Top