
ಚಿಕ್ಕಮಗಳೂರು: ಅಯ್ಯಪ್ಪ ದೇಗುಲವನ್ನು ಭಕ್ತರ ದರ್ಶನಕ್ಕೆ ತೆರೆಯಲಾಗಿದ್ದು ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಈ ವೇಳೆ ಅಯ್ಯಪ್ಪನ ಸನ್ನಿಧಿಗೆ ತೆರಳುತ್ತಾರೆ.
ಇಲ್ಲಿ ಶ್ವಾನವೊಂದು ಕೂಡ ಶಬರಿಮಲೆಗೆ ಹೊರಟಿದೆ. ಕಾಲು ನಡಿಗೆಯಲ್ಲಿ ತೆರಳುತ್ತಿರುವ ಅಯ್ಯಪ್ಪ ಭಕ್ತರೊಂದಿಗೆ ನೂರಾರು ಕಿಮೀ ಪಾದಯಾತ್ರೆಯೊಂದಿಗೆ ಶ್ವಾನವೂ ಕೂಡ ಅಯ್ಯಪ್ಪ ದೇಗುಲಕ್ಕೆ ತೆರಳುತ್ತಿದೆ.
#WATCH Karnataka: A stray dog has been following a group of 13 Ayyappa devotees, who are on a pilgrimage to Kerala's Sabarimala & has walked 480 km so far. The devotees started from Andhra Pradesh's Tirumala on Oct 31 & have reached Chikkamagaluru dist's Kottigehara now. (17.11) pic.twitter.com/9ke8uFwRCt
— ANI (@ANI) November 18, 2019
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ತೋಡಾರು ಗ್ರಾಮದ ಮಾಲಾಧಾರಿಗಳು, ತಿರುಪತಿಯಿಂದ ಆಗಮಿಸಿದ್ದು, ಮಾಲಾಧಾರಿಗಳೊಂದಿಗೆ ಶ್ವಾನವೂ ಕೂಡ ಆಗಮಿಸಿದೆ.
ಅಕ್ಟೋಬರ್ 31 ರಂದು ತಿರುಪತಿಯಿಂದ ಪಾದಯಾತ್ರೆಯಲ್ಲಿ ಅಯ್ಯಪ್ಪ ಮಾಲಾಧಾರಿಗಳು ಹೊರಟಿದ್ದು, 16 ದಿನ ಕಾಲ ಅಯ್ಯಪ್ಪ ಮಾಲಾಧಾರಿಗಳ ಜೊತೆ ಶ್ವಾನ ಪಾದಯಾತ್ರೆ ಮಾಡಿಕೊಂಡು ಬರುತ್ತಿದೆ.
ನೂರಾರು ಕಿಲೋ ಮೀಟರ್ ಸಂಚರಿಸಿದ ಕಾರಣ ಶ್ವಾನದ ಕಾಲಿಗೆ ಎರಡು ಬಾರಿ ಚಿಕಿತ್ಸೆ ನೀಡಲಾಗಿದ್ದು, ಆದರೂ ತನ್ನ ಸಂಚಾರವನ್ನು ನಿಲ್ಲಿಸುತ್ತಿಲ್ಲ.
ತಿರುಪತಿಯಿಂದ ಪಾದಯಾತ್ರೆ ಮೂಲಕ ಶಬರಿಮಲೆಗೆ ಹೊರಟ 6 ಮಂದಿ ಮಾಲಾಧಾರಿಗಳೊಂದಿಗೆ ಶ್ವಾನವೂ ಪಾದಯಾತ್ರೆ ಮಾಡುತ್ತಿದೆ.
You must be logged in to post a comment.