
ನವದೆಹಲಿ: ಆದಾಯ ತೆರಿಗೆ ಪಾವತಿ, ತೆರಿಗೆ ಸಂಬಂಧಿತ ಎಲ್ಲಾ ವಿವರ ಸಲ್ಲಿಕೆ ಅವಧಿ ವಿಸ್ತರಣೆ ಹಾಗೂ ಆಧಾರ್-ಪ್ಯಾನ್ ಕಾರ್ಡ್ ಲಿಂಕ್ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
#WATCH Finance Minister Nirmala Sitharaman briefs the media in Delhi https://t.co/DasVFDRCas
— ANI (@ANI) March 24, 2020
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018-19ರ ಆರ್ಥಿಕ ವರ್ಷದ ಆದಾಯ ತೆರಿಗೆ (ಐಟಿ) ರಿಟರ್ನ್ಸ್ನ ಗಡುವನ್ನು 2020 ರ ಜೂನ್ 30 ಕ್ಕೆ ವಿಸ್ತರಿಸಲಾಗಿದೆ. ಮಾರ್ಚ್ 31ರವರೆಗೆ ಇದ್ದ ಗಡುವನ್ನು ಜೂನ್ 30, 2020ಕ್ಕೆ ವಿಸ್ತರಿಸಲಾಗಿದೆ. ಅಲ್ಲದೆ, ವಿಳಂಬದ ಪಾವತಿಗಳಿಗಾಗಿ ಬಡ್ಡಿದರವನ್ನು ಶೇ. 12 ರಿಂದ ಶೇ. 9ಕ್ಕೆ ಇಳಿಸಲಾಗಿದೆ ಎಂದೂ ತಿಳಿಸಿದ್ದಾರೆ.
Last date for Income tax return for Financial Year 2018-19 extended to 30th June 2020
— All India Radio News (@airnewsalerts) March 24, 2020
◾️ Aadha-PAN Linking date extended to June 30th 2020
FM @nsitharaman pic.twitter.com/MmTyrvbdBx
ಅಲ್ಲದೆ, ಆಧಾರ್-ಪ್ಯಾನ್ ಲಿಂಕ್ ಮಾಡುವ ಗಡುವನ್ನು ಸಹ 3 ತಿಂಗಳ ಕಾಲ ಅಂದರೆ ಜೂನ್ 30 ಕ್ಕೆ ವಿಸ್ತರಿಸಲಾಗಿದೆ.
ಪ್ರಮುಖ ಅಂಶಗಳು:
ಬ್ಯಾಂಕ್ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಗಾಗಿನ ಶುಲ್ಕ ವಿಧಿಸುವುದಿಲ್ಲ ಡಿಜಿಟಲ್ ವ್ಯಾಪಾರ ಮತ್ತು ವಹಿವಾಟುಗಳಿಗೆ ಬ್ಯಾಂಕ್ ಶುಲ್ಕವನ್ನು ಕಡಿತಗೊಳಿಸಲಾಗಿದೆ.
ನಾವು ಆರ್ಥಿಕ ಪ್ಯಾಕೇಜ್ ನೊಡನೆ ಅತಿ ಶೀಘ್ರದಲ್ಲೇ ಬರಲಿದ್ದೇವೆ. 2019-2020ರ ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು 2020 ರ ಜೂನ್ 30 ಕ್ಕೆ ವಿಸ್ತರಿಸಲಾಗಿದೆ. ವಿಳಂಬವಾದ ಪಾವತಿಗಳಿಗಾಗಿ ಬಡ್ಡಿದರವನ್ನು 12% ರಿಂದ 9% ಕ್ಕೆ ಇಳಿಸಲಾಗಿದೆ.
ಆಧಾರ್-ಪ್ಯಾನ್ ಲಿಂಕ್ ಮಾಡುವ ದಿನಾಂಕ ಮತ್ತು ವಿವಾದ್ ಸೆ ವಿಶ್ವಾಸ್ ಯೋಜನೆಯನ್ನು 2020 ರ ಜೂನ್ 30ರವರೆಗೆ ಮುಂದುವರಿಸಲಾಗುವುದು.
ಮಾರ್ಚ್, ಏಪ್ರಿಲ್, ಮೇ 2020 ರ ಜಿಎಸ್ಟಿ ರಿಟರ್ನ್ಸ್ ಹಾಗೂ ಕಾಂಪೇಷನ್ ರಿಟರ್ನ್ಸ್ ಸಲ್ಲಿಕೆಯ ಅಂತಿಮ ದಿನಾಂಕವನ್ನಾಗಿ ಜೂನ್ 30, 2020ನ್ನು ನಿಗದಿ ಮಾಡಲಾಗಿದೆ.
5 ಕೋಟಿ ರೂ.ಗಿಂತ ಕಡಿಮೆ ವಹಿವಾಟು,ನಡೆಸುವ ಯಾವುದೇ ಕಂಪನಿಗೆ ದಂಡ ಅಥವಾ ಬಡ್ಡಿ ಅಥವಾ ವಿಳಂಬ ಶುಲ್ಕ ವಿಧಿಸಲಾಗುವುದಿಲ್ಲ.5 ಕೋಟಿ ರೂ.ಗಳ ವಹಿವಾಟು ಹೊಂದಿರುವ ದೊಡ್ಡ ಕಂಪನಿಗಳಿಗೆ, ಶೇಕಡಾ 9 ರಷ್ಟು ಕಡಿಮೆ ದರದಲ್ಲಿ ಬಡ್ಡಿ ವಿಧಿಸಲಾಗುತ್ತದೆ.
ಆಮದು / ರಫ್ತುದಾರರಿಗೆ ಪರಿಹಾರ: ಕಸ್ಟಮ್ಸ್ ಇಲಾಖೆ ತನ್ನ ಕರ್ತವ್ಯ ಪಾಲನೆಯಲ್ಲಿದೆ. ಜೂನ್ 30, 2020 ರವರೆಗೆ ಈ ವಿಭಾಗವು 24×7 ಅತ್ಯಗತ್ಯ ಸೇವೆಯಾಗಿ ಮುಂದುವರಿಯಲಿದೆ.
ಸಂಪತ್ತು ತೆರಿಗೆ ಕಾಯ್ದೆ, ಆದಾಯ ತೆರಿಗೆ ಕಾಯ್ದೆ, ಬೆನಾಮಿ ವಹಿವಾಟು ಕಾಯ್ದೆ, ಕಪ್ಪು ಹಣ ಕಾಯ್ದೆ ಅಡಿಯಲ್ಲಿರುವ ಎಲ್ಲಾ ಅನುಸರಣೆಗಳನ್ನು 2020 ರ ಜೂನ್ 30ರವರೆಗೆ ವಿಸ್ತರಿಸಲಾಗಿದೆ.
ಕಂಪನಿಯ ನಿರ್ದೇಶಕರು ಕನಿಷ್ಟ ರೆಸಿಡೆನ್ಸಿಯನ್ನು ಅನುಸರಿಸದಿದ್ದಲ್ಲಿ (182 ದಿನಗಳು ಅಥವಾ ಅದಕ್ಕಿಂತ ಹೆಚ್ಚು ಕಾಲ ದೇಶದಲ್ಲಿ ಉಳಿಯುವುದು), ಇದನ್ನು ಉಲ್ಲಂಘನೆ ಎಂದು ಪರಿಗಣಿಸಲಾಗುವುದಿಲ್ಲ:
“ಹೊಸದಾಗಿ ಸಂಯೋಜಿತ ಕಂಪನಿಗಳಿಗೆ, 6 ತಿಂಗಳಲ್ಲಿ ವ್ಯವಹಾರ ಪ್ರಾರಂಭದ ಘೋಷಣೆಯನ್ನು ಸಲ್ಲಿಸುವ ಅವಶ್ಯಕತೆಯಿದೆ, ನಾವು ಈಗ ಹೆಚ್ಚುವರಿ 6 ತಿಂಗಳ ಸಮಯವನ್ನು ನೀಡುತ್ತೇವೆ” ಎಂದು ಸೀತಾರಾಮನ್ ಹೇಳಿದ್ದಾರೆ.
ಸಣ್ಣ ಉದ್ಯಮಗಳಿಗೆ ಪರಿಹಾರವಾಗಿ, ದಿವಾಳಿತನ ಪ್ರಕ್ರಿಯೆಗಳ ಮಿತಿಯನ್ನು ಅಸ್ತಿತ್ವದಲ್ಲಿರುವ 1 ಲಕ್ಷ ರೂ.ಗಳಿಂದ 1 ಕೋಟಿ ರೂ.ಗೆ ವಿಸ್ತರಿಸಲಾಗಿದೆ: .
ಎಟಿಎಂಗಳಿಂದ ಡೆಬಿಟ್ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡುವವರಿಗೆ ಮುಂದಿನ ಮೂರು ತಿಂಗಳವರೆಗೆ ಹೆಚ್ಚುವರಿ ಹಣ ವಿತ್ ಡ್ರಾಗಾಗಿನ ಶುಲ್ಕ ವಿಧಿಸಲಾಗುವುದಿಲ್ಲ. ಈ ಹಿಂಪಡೆಯುವಿಕೆಯನ್ನು ಯಾವುದೇ ಎಟಿಎಂಗಳಿಂದ ಮಾಡಬಹುದಾಗಿದೆ ಎಂದು ಹಣಕಾಸು ಸಚಿವರು ಹೇಳಿದರು,
ಪ್ರಸ್ತುತ ಪರಿಸ್ಥಿತಿಗಳು ಆರು ತಿಂಗಳುಗಳನ್ನು ಮೀರಿದರೆ ದಿವಾಳಿತನ ಮತ್ತು ದಿವಾಳಿತನ ಸಂಹಿತೆಯ ಸೆಕ್ಷನ್ 7, 9 ಮತ್ತು 10 ಅನ್ನು ಅಮಾನತುಗೊಳಿಸುವ ಬಗೆಗೆ ನಾವು ಪರಿಗಣಿಸುತ್ತೇವೆ.
You must be logged in to post a comment.