ಬಂಡೀಪುರದಲ್ಲಿ ರಜಿನಿಕಾಂತ್ ಜೊತೆಯಾದ ಮ್ಯಾನ್​ ವರ್ಸರ್ಸ್​ ವೈಲ್ಡ್ ಖ್ಯಾತಿಯ ಬೇರ್​ ​ಗ್ರಿಲ್ಸ್..​​​!

ಚಾಮರಾಜನಗರ: ಡಿಸ್ಕವರಿ ಚಾನೆಲ್​ನ ಜನಪ್ರಿಯ ಟಿವಿ ಶೋ ಮ್ಯಾನ್​ ವರ್ಸರ್ಸ್​ ವೈಲ್ಡ್​ನಲ್ಲಿ ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ತಲೈವಾ ರಜಿನಿಕಾಂತ್ ಬಂಡೀಪುರದ ಖಾಸಗಿ ರೆಸಾರ್ಟ್​ನಲ್ಲಿ ತಂಗಿದ್ದು, ಬೇರ್ ಗ್ರಿಲ್ಸ್​​ ಕೂಡಾ ರೆಸಾರ್ಟ್​ಗೆ ತೆರಳಿದ್ದಾರೆ‌‌‌. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಜೊತೆಗೆ ಬಾಲಿವುಡ್’ನ ಆಕ್ಷನ್ ಹೀರೋ ಅಕ್ಷಯ್ ಕುಮಾರ್ ಕೂಡ ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಹರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಆಕ್ಷಯ್ ಕುಮಾರ್ ಆಗಮಿಸಬೇಕಾಗಿದೆ.

ಇತ್ತೀಚಿಗೆ ಮಾನವ ಅಭಿವೃದ್ದಿಯಿಂದಾಗಿ ಕಾಡು ಪ್ರಾಣಿಗಳ ಸಂತತಿ ಅಪಾಯದ ನಷ್ಟದಲ್ಲಿದೆ. ಹೀಗಾಗಿ ಈ ಬಗ್ಗೆ ಜಾಗೃತಿ ಮೂಡಿಸಲು ಮಾನವ-ವನ್ಯಜೀವಿ ಸಂಘರ್ಷ ಸಾಕ್ಷ್ಯಚಿತ್ರದಲ್ಲಿ ಅಭಿನಯಿಸಲು ಈ ಸ್ಟಾರ್‌ಗಳು ಆಗಮಿಸಿದ್ದಾರೆ ಎಂದು ಹೇಳಲಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 3 ದಿನಗಳ ಕಾಲ ಚಿತ್ರೀಕರಣ ನಡೆಯಲಿದ್ದು, ಈಗಾಗಲೇ ಅನುಮತಿ ಪಡೆದಿದ್ದಾರೆ. ಈ ಹಿಂದೆ ಗ್ರಿಲ್ಸ್ ಅವರೊಂದಿಗೆ ಪ್ರಧಾನಿ ಮೋದಿ ಕಾಡು ಸುತ್ತಿದ್ದರು. ಈಗ ರಜಿನಿ ಸುತ್ತಾಡಿ ಪರಿಸರ ಜಾಗೃತಿ ಮೂಡಿಸಲಿದ್ದಾರೆ. ಚಿತ್ರೀಕರಣದ ಸ್ಥಳದ ಬಗ್ಗೆ ಇನ್ನೂ ತಿಳಿದುಬಂದಿಲ್ಲ.

View this post on Instagram

ಸೂಪರ್​ ಸ್ಟಾರ್​ ರಜನಿಕಾಂತ್​​ ಅವರು ಇಂದು ಬೆಳಗ್ಗೆ ಚೆನ್ನೈ ಮೂಲಕ ಮೈಸೂರಿಗೆ ಪ್ರಯಾಣ ಬೆಳೆಸಿದ್ದ ವಿಮಾನ ದಟ್ಟ ಮಂಜಿನ ಕಾರಣದಿಂದ ಒಂದುವರೆ ಗಂಟೆ ವಿಳಂಬವಾಗಿ ಲ್ಯಾಂಡಿಂಗ್ ಆದ ಘಟನೆ ನಡೆದಿದೆ. ರಜನಿಕಾಂತ್ ಅವರು ಖಾಸಗಿ ಕಾರ್ಯಕ್ರಮ ನಿಮಿತ್ತ ಇಂದು ಬೆಳಿಗ್ಗೆ ಚೆನ್ನೈನಿಂದ- ಮೈಸೂರಿಗೆ ಪ್ರಯಾಣಿಸಿದ್ದರು. ಈ ವಿಮಾನ ಬೆಳಗ್ಗೆ 8.10ಕ್ಕೆ ಮೈಸೂರು ತಲುಪಬೇಕಾಗಿತ್ತು. ಆದರೆ ಮೈಸೂರು ವಿಮಾನ ನಿಲ್ದಾಣದಲ್ಲಿ ದಟ್ಟ ಮಂಜು ಆವರಿಸಿದ್ದ ಕಾರಣ, ಮುಂಜಾಗ್ರತ ಕ್ರಮವಾಗಿ ವಿಮಾನದ ಲ್ಯಾಂಡಿಂಗ್ ವಿಳಂಬ ಮಾಡಲು ಸೂಚಿಸಲಾಯಿತು. ಈ ಹಿನ್ನೆಲೆಯಲ್ಲಿ ನಟ ರಜನಿಕಾಂತ್, ಸಹ ಪ್ರಯಾಣಿಕರ ಜತೆ ವಿಮಾನದಲ್ಲೇ ( 42 ಮಂದಿ ಪ್ರಯಾಣಿಕರು ) ಒಂದುವರೆ ಗಂಟೆ ಕಾಲ ಕಳೆಯಬೇಕಾಯಿತು. ಈ ವೇಳೆ ಕೆಲ ಪ್ರಯಾಣಿಕರು ನೆಚ್ಚಿನ ನಟನ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. . . ‌. #Rajinikanth #Superstarrajinikanth #mysuruairport #mysore #mysuru #mysuruonline #karnatakatourism #travelkarnataka #karnataka

A post shared by Mysuru Online (@mysuruonline) on

Scroll to Top