ಈ ಬಾರಿ ಅರ್ಜುನನ ಬದಲಿಗೆ ಅಭಿಮನ್ಯು ಅಂಬಾರಿ ಹೊರುವ ಸಾಧ್ಯತೆ!

ಮೈಸೂರು: ಈ ಬಾರಿ ಜಂಬೂ ಸವಾರಿ ಮೆರವಣಿಗೆಯಲ್ಲಿ ಅಂಬಾರಿ ಹೊರುವ ಭಾಗ್ಯ ಅಭಿಮನ್ಯುಗೆ ಸಿಗುವ ಸಾಧ್ಯತೆ ಇದೆ.

ವಿಶ್ವ ವಿಖ್ಯಾತ ಮೈಸೂರು ದಸರಾ 2020ರ ಆಚರಣೆ ಕುರಿತು ನಾಳೆ ಹೈಪವರ್ ಕಮಿಟಿ ಮೀಟಿಂಗ್ ನಲ್ಲಿ ಅಂತಿಮ ನಿರ್ಧಾರವಾಗಲಿದೆ. ಈ ವೇಳೆ ಅರ್ಜುನನ ಬದಲಿಗೆ ಅಭಿಮನ್ಯು ಅಂಬಾರಿ ಹೊರುವ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ.

ಹೌದು, ಸತತ 8 ವರ್ಷ ಯಶಸ್ವಿಯಾಗಿ ಅಂಬಾರಿ ಹೊತ್ತ ಅರ್ಜುನ ಈಗಾಗಲೇ 60 ವರ್ಷ ಪೂರೈಸಿದ್ದು ಈ ಹಿನ್ನೆಲೆ ಈ ಬಾರಿ ಬೇರೆ ಆನೆ ಅಂಬಾರಿ ಹೊರಬೇಕಾಗಿದೆ. ಸುಪ್ರೀಂಕೋರ್ಟ್ ಆದೇಶದಂತೆ 60 ವರ್ಷ ತುಂಬಿದ ಆನೆಗಳಿಗೆ ಭಾರ ಹೊರಿಸುವಂತಿಲ್ಲ. ಹೀಗಾಗಿ ಈ ಬಾರಿ ಅರ್ಜುನನ ಬದಲಿಗೆ ಅಭಿಮನ್ಯು ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡುವ ಸಾಧ್ಯತೆ ಇದೆ.

ಇನ್ನು ಈ ಬಗ್ಗೆ ಅರಣ್ಯ ಇಲಾಖೆ ಕಾನೂನು ತಜ್ಞರ ಸಲಹೆ ಪಡೆದು ಶೀಘ್ರವೇ ನಿರ್ಧಾರ ಕೈಗೊಳ್ಳಲಿದೆ. ಕೂಂಬಿಂಗ್ ಸ್ಪೆಷಲಿಸ್ಟ್ ಎಂದೇ ಹೆಗ್ಗಳಿಕೆ ಪಡೆದಿರುವ ಅಭಿಮನ್ಯು ಆನೆ ದಸರಾದಲ್ಲಿ ನೌಪತ್ ಆನೆಯಾಗಿ ಕಾರ್ಯನಿರ್ವಹಿಸುತ್ತಿದ್ದಾನೆ.

Scroll to Top